MULKI: ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ

 


ಮುಲ್ಕಿ: ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿ ಮಾತನಾಡಿ ಎಳೆಯ ಮಕ್ಕಳನ್ನು ಉತ್ತಮವಾಗಿ ಬೆಳೆಸುವ ಶಿಕ್ಷಕ ವೃತ್ತಿಯು ಶ್ರೇಷ್ಠವಾಗಿದ್ದು ಸಮಾಜದಲ್ಲಿ ಶಿಕ್ಷಣ ಕ್ಷೇತ್ರದ ಸಾಧಕರನ್ನು ಗೌರವಿಸುವ ಕಾರ್ಯ ಅಭಿನಂದನೀಯ ಎಂದರು ಎಂದರು

ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಮೊಗವೀರ ಮಾಸಪತ್ರಿಕೆ ಸಂಪಾದಕ ಅಶೋಕ್ ಸುವರ್ಣ,

 ಕಿಲ್ಪಾಡಿ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದ ಅಧ್ಯಕ್ಷ ಕೆ.ನರಸಿಂಹ ಪೈ

 ನಿವೃತ್ತ ಪ್ರಾಂಶುಪಾಲ ಸ್ಯಾಮ್ ಮಾಬೆನ್, ವೈ ಎನ್ ಸಾಲ್ಯಾನ್, ಪಿಕೆ ಸದಾನಂದ, ಹೊಸ ಅಂಗಣದ ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಜೆ.ಸಿ ದಿನೇಶ್ ಶೆಟ್ಟಿ, ರವಿಚಂದ್ರ ರಾವ್, ವಾಮನ್ ಕೋಟ್ಯಾನ್ ನಡಿಕುದ್ರು, ಜಯಪಾಲ ಶೆಟ್ಟಿ ಐಕಳ, ಬಂಕಿನಾಯಕರು, ಸರೋಜಿನಿ ಸುವರ್ಣ, ಸಾಧು ಅಂಚನ್, ದಿನೇಶ್ ಕೊಲ್ನಾಡು, ವಕೀಲ ರವೀಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು 

ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಕಿಲ್ಪಾಡಿ ವ್ಯಾಸ ಮಹರ್ಷಿ ವಿದ್ಯಾಪೀಠದ ನಿವೃತ್ತ ಪ್ರಾಂಶುಪಾಲರಾದ ಚಂದ್ರಿಕಾ ಭಂಡಾರಿ ರವರನ್ನು ಸನ್ಮಾನಿಸಲಾಯಿತು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತ ಡಾ ಹರೀಶ್ಚಂದ್ರ ಪಿ ಸಾಲ್ಯಾನ್ ರವರನ್ನು ಗೌರವಿಸಲಾಯಿತು ಹಾಗೂ ಇತ್ತೀಚೆಗೆ ನಿಧನರಾದ ಮುಲ್ಕಿಯ ಪ್ರಸಿದ್ಧ ಪಂಡಿತರಾದ ಡಾ. ಬಿ ಎಚ್ ರಾಘವ ರಾವ್ ರವರಿಗೆ ನುಡಿ ನಮನಗಳನ್ನು ಸಲ್ಲಿಸಲಾಯಿತು