ಸೇವಾ ವಿಷಯದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ: ಸಂಸದರ ಶಿಫಾರಸು ತಂದಿದ್ದ ನೌಕರನ ಕಡ್ಡಾಯ ನಿವೃತ್ತಿ ಎತ್ತಿಹಿಡಿದ ಹೈಕೋರ್ಟ್‌

ಸೇವಾ ವಿಷಯದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ: ಸಂಸದರ ಶಿಫಾರಸು ತಂದಿದ್ದ ನೌಕರನ ಕಡ್ಡಾಯ ನಿವೃತ್ತಿ ಎತ್ತಿಹಿಡಿದ ಹೈಕೋರ್ಟ್‌



ವರ್ಗಾವಣೆ ತಡೆಗೆ ಸಂಸದರೊಬ್ಬರ ಶಿಫಾರಸು ತಂದಿದ್ದ ಸರ್ಕಾರಿ ನೌಕರನನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಿದ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿಹಿಡಿದಿದೆ.


ಕರ್ನಾಟಕ ಹೈಕೋರ್ಟ್‌ನ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾ. ರಾಮಚಂದ್ರ ಡಿ. ಹುದ್ದಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಮಹತ್ವದ ಆದೇಶ ಹೊರಡಿಸಿದೆ.


ಸೇವಾ ವಿಷಯದಲ್ಲಿ ರಾಜಕೀಯ ಹಸ್ತಕ್ಷೇಪ ಅನಗತ್ಯವಾಗಿದ್ದು, ಅಪ್ರಸ್ತುತ ವಿಷಯಗಳಿಗೆ ಎಡೆ ಮಾಡಿಕೊಡುತ್ತದೆ. ಇಂತಹ ವಿಚಾರಗಳು ಸಾರ್ವಜನಿಕ ಆಡಳಿತ ಮತ್ತು ಉದ್ಯೋಗದಾತರ ಹಿತಾಸಕ್ತಿ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.