Ullal: ಮನೆ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು

 



ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.

 ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದ ಕಾರಣ ಈ ಘಟನೆ ಸಂಭವಿಸಿದೆ.


ಇದರಿಂದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು, ಮನೆಯ ಗೋಡೆ ಕುಸಿತ ಆಗಿದೆ.  ಮನೆಯೊಳಗೆ ವಾಸ್ತವ್ಯ ವಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟಿದ್ದಾರೆ.


ಮೂವರ ಮೃತದೇಹವನ್ನು  ಹೊರತೆಗೆಯಲಾಗಿದ್ದು, ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ.