ಬಕ್ರೀದ್ ಹಬ್ಬ ಹಿನ್ನೆಲೆ: ಜಾನುವಾರು ಹತ್ಯೆ ನಿಷೇಧಕ್ಕೆ VHP ವತಿಯಿಂದ ಕ್ರಮಕ್ಕೆ ಮನವಿ

 



ವರದಿ : ಕವಿತಾ ಕೆ ಮಾಣಿ


ಬಕ್ರೀದ್ ಹಾಗೂ ಮತ್ತಿತರ ಹಬ್ಬದ ಸಂದರ್ಭದಲ್ಲಿ ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ವಿಶ್ವ ಹಿಂದೂ ಪರಿಷತ್ ಭಜರಂಗದಳದ  ಬಂಟ್ವಾಳ ಪ್ರಖಂಡದ ವತಿಯಿಂದ  ಬಂಟ್ವಾಳ ಗ್ರಾಮಾಂತರ ಠಾಣೆ ಮತ್ತು ಬಂಟ್ವಾಳ ನಗರ ಠಾಣೆಗೆ ಮನವಿ ಮಾಡಲಾಯಿತು.


 ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡದ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ, ಬಜರಂಗದಳ ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್ ಹಾಗೂ ಮತ್ತಿತರು ಉಪಸ್ಥಿತರಿದ್ದರು.