ರಸ್ತೆ ಮೇಲಿನ ಮಣ್ಣನ್ನು ತೆರವುಗೊಳಿಸುವ ವೇಳೆ ಮತ್ತೆ ಗುಡ್ಡ ಕುಸಿದು ಜೆಸಿಬಿಯನ್ನು ಒಂದಷ್ಟು ದೂರಕ್ಕೆ ತಳ್ಳಿದೆ. ನಂತರ ಇನ್ನೊಂದು ಜೆಸಿಬಿಯನ್ನು ತರಿಸಿ ಮೊದಲ ಜೆಸಿಬಿಯನ್ನು ಸ್ಥಳದಿಂದ ತೆರವುಗೊಳಿಸಲಾಯಿತು.
ಗುಡ್ಡ ಜರಿದ ಪರಿಣಾಮ ಹತ್ತಿರದ ಮೂರು ಮನೆಗಳಿಗೆ ಅಪಾಯ ಉಂಟಾಗಿದ್ದು ಈ ಕುಟುಂಬಗಳ ಸ್ಥಳಾಂತರಕ್ಕೆ ಪುತ್ತಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭೀಮಾನಾಯಕ್ ಸೂಚಿಸಿದ್ದಾರೆ. ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್ , ಕಂದಾಯ ನಿರೀಕ್ಷಕ ಮಂಜುನಾಥ್, ಅರಣ್ಯ, ಮೆಸ್ಕಾಂ ಹಾಗೂ ಅಗ್ನಿಶಾಮಕ ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Social Icons